ಗುರುವಾಯನಕೆರೆ: ಬೆಳ್ತಂಗಡಿಯಿಂದ ಉಪ್ಪಿನಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಮೇ. 2ರಂದು ನಡೆದಿದೆ. ಪ್ರಯಾಣಿಕರನ್ನು ತುಂಬಿಸಿಕೊಂಡು ತೆರಳುತ್ತಿದ್ದ ಬಸ್ ಮೇಲೆ ಏಕಾಏಕಿ ದುಷ್ಕರ್ಮಿಗಳು ಕಲ್ಲು ಹೊಡೆದು ಬಸ್ಸಿನ ಮುಂಭಾಗದ ಕನ್ನಡಿಯು ಸಂಪೂರ್ಣ ಹಾನಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಇತರ ವಾಹನದಲ್ಲಿ ಯಾವುದೇ ತೊಂದರೆಯಾಗದಂತೆ ಕಳುಹಿಸಿಕೊಡಲಾಗಿದೆ.
ಗುರುವಾಯನಕೆರೆ ಬಸ್ ಮೇಲೆ ಕಲ್ಲು ತೂರಾಟ
