ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಮನಶ್ರೀರವರಿಗೆ ಸನ್ಮಾನ

0

ಬೆಳಾಲು: ಮೇ 8ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಯಶೋಧ ದಂಪತಿಗಳ ಪುತ್ರಿ ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು‌.

ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಮುಂಡಾಜೆ, ತುಳಸಿ ಉಮೇಶ್ ಮಾಲಾಡಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಇವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here