ಶಿಬಾಜೆ: ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ನಮ್ಮ ದೇಶದ ಸೈನಿಕರಿಗೆ ದೇವರು ಹೆಚ್ಚಿನ ಶಕ್ತಿ, ಸಾಮರ್ಥ್ಯ ನೀಡಬೇಕೆಂದು ಮತ್ತು ಅವರ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಎ. ಶ್ರೀಧರ್ ರಾವ್, ಸರ್ವ ಸದಸ್ಯರು, ಅರ್ಚಕ ವೃಂದ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಆಪರೇಷನ್ ಸಿಂಧೂರ ಯಶಸ್ವಿ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ವಿಶೇಷ ಪೂಜೆ
