ಮುಂಡೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ನಮ್ಮ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂಬುದಾಗಿ ಅರ್ಚಕ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಭಜನಾ ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.