ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್, ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಇದರ ಆಶ್ರಯದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಮೇ.20ರಂದು ಪೂರ್ವಾಹ್ನ ಗಂಟೆ 10ರಿಂದ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವ್ಯಸನಮುಕ್ತರಾದ 2900 ಮಂದಿ ನವಜೀವನ ಸದಸ್ಯರು ಮತ್ತು ಅವರ ಕುಟುಂಬಸ್ಥರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ.
ಭಾವೈಕ್ಯತಾ ಮಹಾಸಂಸ್ಥಾನ ಪೀಠ ಶಿರಹಟ್ಟಿ, ಬಾಳೆಹೊಸುರ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳ ಆಶೀರ್ವಚನ ನೀಡಲಿದ್ದಾರೆ.
ವಾರ್ಷಿಕ ವರದಿ ಬಿಡುಗಡೆಯನ್ನು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆಯವರು ಮಾಡಲಿದ್ದಾರೆ.
ಸ್ವಾಸ್ಥ್ಯ, ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ಆಶಯ ನುಡಿಗಳನ್ನು ಕ್ಷೇಮವನ ಬೆಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್., ನೆರವೇರಿಸಲಿದ್ದಾರೆ.
‘ಪುನರ್ಜನ್ಮ’ ಆಳ್ವಾಸ್ ವ್ಯಸನಮುಕ್ತಿ ಕೇಂದ್ರ ಮುಖ್ಯ ವೈದ್ಯಾಧಿಕಾರಿ ವಿನಯ ಆಳ್ವ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಟ್ರಸ್ಟಿ ಪಿ. ವಿ. ಭಂಡಾರಿ, ಡಾ। ಶ್ರೀನಿವಾಸ ಭಟ್, ವಿ. ರಾಮಸ್ವಾಮಿ, ದ.ಕ. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಎಂ. ‘ನವಜೀವನ’ ಪ್ರಶಸ್ತಿ ಪ್ರದಾನ ಗೌರವ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.