ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತೆ ಪ್ರವಚನ ಸಪ್ತಾಹ

0

ಬೆಳ್ತಂಗಡಿ: ತಾಲೂಕಿನ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ.17ರಿಂದ 23ರವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ. ಮೇ.17ರಂದು ಚಾಲನೆ ನೀಡಲಾಯಿತು.

ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲನೆ ಮಾಡಿದರು. ವೇದಿಕೆಯಲ್ಲಿ ಪ್ರವಚನಕಾರರಾದ ವೀಣಾ ಬನ್ನಂಜೆ, ನಾವೂರು ಆರೋಗ್ಯ ಕ್ಲಿನಿಕ್ ನ ವೈದ್ಯ ಪ್ರದೀಪ್, ಕೃಷಿಕ ಎಂ. ಜನಾರ್ದನ ಪೂಜಾರಿ ಗೇರುಕಟ್ಟೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯ ಉಪಾಧ್ಯಕ್ಷ ಗಂಗಾಧರ್ ಮಿತ್ತಮಾರ್ ಉಪಸ್ಥಿತರಿದ್ದರು.ಸುರೇಶ್ ಪ್ರಾರ್ಥನೆ ಮಾಡಿದರು.

ನಿವೃತ್ತ ಉಪನ್ಯಾಸಕ ಶ್ರೀಶ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಹನ್ ಶೆಟ್ಟಿಗಾರ್ ಸ್ವಾಗತಿಸಿ, ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here