Site icon Suddi Belthangady

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮೇ.18ರಂದು ನಡೆದಿದೆ. ಪರಿಣಾಮ ಬಸ್‌ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ 100ಮೀ. ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದ ಪರಿಣಾಮದಿಂದ ಬಸ್ಸಿನ ಮುಂಭಾಗ ಹಾಗೂ ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ವಾಹನ ನಿಂತಿದ್ದರಿಂದ ಸುಮಾರು 5ಕಿ.ಮೀ.ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ವಾಹನ ದಟ್ಟಣೆಯೂ ಅಧಿಕವಾಗಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಬಸ್ಸು ಚಾಲಕ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ಕಾಶಿಬೆಟ್ಟು ನಿವಾಸಿ ಪ್ರಣಯ್ ಮತ್ತು ಕನಕಪುರ ನಿವಾಸಿ ಮಂಜುನಾಥ ಗಾಯಗೊಂಡವರು. ಎಂದು ತಿಳಿದು ಬಂದಿದೆ.

Exit mobile version