ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ತಂಡದಿಂದ ಭಜಕರಿಗೆ ಪುಸ್ತಕ ವಿತರಣೆ

0

ಬೆಳ್ತಂಗಡಿ: ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ತಂಡದಿಂದ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಮೇ. 23ರಂದು 37 ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಸಂಪೂರ್ಣ ಪುಸ್ತಕಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷ ಜಾರಪ್ಪ ಸಪಲ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಮತ್ತು ಪ್ರಧಾನ ಅರ್ಚಕ ಶ್ರೀಧರ ಲಿಂಗಾಯತ ಪುಸ್ತಕ ವಿತರಿಸಿದರು.

LEAVE A REPLY

Please enter your comment!
Please enter your name here