ಬೆಳ್ತಂಗಡಿ: ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ತಂಡದಿಂದ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಮೇ. 23ರಂದು 37 ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಸಂಪೂರ್ಣ ಪುಸ್ತಕಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಅಧ್ಯಕ್ಷ ಜಾರಪ್ಪ ಸಪಲ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಮತ್ತು ಪ್ರಧಾನ ಅರ್ಚಕ ಶ್ರೀಧರ ಲಿಂಗಾಯತ ಪುಸ್ತಕ ವಿತರಿಸಿದರು.
ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ತಂಡದಿಂದ ಭಜಕರಿಗೆ ಪುಸ್ತಕ ವಿತರಣೆ
