ಎಸ್.ಪಿ. ಯತೀಶ್ ಎನ್., ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ವರ್ಗಾವಣೆ

0


ಬೆಳ್ತಂಗಡಿ: ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್ ಮತ್ತು ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಪ್ರಸ್ತುತ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ಡಾ.ಅರುಣ್ ಕೆ. ಅವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ನೇಮಿಸಿ ವರ್ಗಾವಣೆಗೊಳಿಸಲಾಗಿದೆ.

ಈ ಹಿಂದೆ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದು ಪ್ರಸ್ತುತ ಪೊಲೀಸ್‌ ಇಂಟೆಲಿಜೆನ್ಸ್ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಸುಧೀ‌ರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ಪೊಲೀಸ್‌ ಆಯುಕ್ತರನ್ನಾಗಿ ನೇಮಕಗೊಳಿಸಿ ವರ್ಗಾವಣೆಗೊಳಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್‌ ಅವರನ್ನು ಆರ್ಥಿಕ ಅಪರಾಧಗಳು ಮತ್ತು ಅಪರಾಧಗಳ ತನಿಖೆ ವಿಭಾಗದ ಡಿಐಜಿಯಾಗಿ ನೇಮಕಗೊಳಿಸಿ ವರ್ಗಾವಣೆಗೊಳಿಸಲಾಗಿದೆ.ದ.ಕ.ಎಸ್ಪಿ ಯತೀಶ್ ಎನ್.ಅವರಿಗೆ ಸದ್ಯ ಯಾವುದೇ ಹುದ್ದೆ ಕಾಣಿಸಲಾಗಿಲ್ಲ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here