ಲಾಯಿಲ ಗುಡ್ಡ ಕುಸಿದು ರಸ್ತೆ ಸಂಪರ್ಕ ಬಂದ್ – ಸಾರ್ವಜನಿಕರಿಂದ ತೆರವು

0

ಬೆಳ್ತಂಗಡಿ: ತಾಲೂಕಿನಾದ್ಯಂತ ಮೇ. 30ರಂದು ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಲಾಯಿಲ-ನಿನ್ನಿಕಲ್ಲು ಚಂದ್ಕೂರು ರಸ್ತೆಯಲ್ಲಿ ಬಂಡೆಕಲ್ಲು ಸಮೇತ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಗೆ ಸಾರ್ವಜನಿಕರು ಮಾಹಿತಿ ನೀಡಲಾಗಿದ್ದು, ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರನ್ನು ಬದಲಿ ರಸ್ತೆಯಲ್ಲಿ ಓಡಾಡಲು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here