ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಕೊಯ್ಯೂರು ದೇವಸ್ಥಾನ ಶಾಲೆಯಲ್ಲಿ ಗ್ರಾಮ ಪಂಚಾಯತ್ ಕೊಯ್ಯೂರು ಸಹಭಾಗಿತ್ವದಲ್ಲಿ 2.5 NVH eyeMiTRA ಸುರತ್ಕಲ್ ಇವರಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರವನ್ನು ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.

ಡಾ. ಬಾಲಚಂದ್ರ ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕಣ್ಣಿನ ತಪಾಸಣೆಯ ಮಹತ್ವ ಮತ್ತು ನೇತ್ರದಾನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್, ಸದಸ್ಯರುಗಳಾದ ವಿಶಾಲಾಕ್ಷಿ, ಯಶವಂತ ಪೂರ್ಯಾಳ ಕೊಯ್ಯೂರು, ಗಿರೀಶ್ ಆಚಾರ್ಯ ಮಲೆಬೆಟ್ಟು, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಂತಕೃಷ್ಣ ಭಟ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪುರಂದರ ಗೌಡ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಮೊದಲಾದವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 120ಕ್ಕೂ ಅಧಿಕ ಮಂದಿ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.