ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್., ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಸುಧಾಕರ ಮಜಲು, ಲತೀಫ್ ಪರಿಮ, ವಿಜಯ ಗೌಡ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಹಾಜರಿದ್ದರು.