ತಣ್ಣೀರುಪಂತ: ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗ್ಗ ಪ. ಜಾತಿ ಕಾಲನಿ ಮತ್ತು ಕರಾಯ ಕಡ್ತಿಮಾರು ಎಂಬಲ್ಲಿ ಗುಡ್ಡ ಜರಿತವಾಗಿದ್ದು ಹಲವಾರು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ, ರಾಯಕೋಡ್ ರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ತಹಸೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ಥಳದಲ್ಲಿದ್ದು ಮಾಹಿತಿಗಳನ್ನು ನೀಡಿದರು. ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳಲ್ಲಿ ವಾಸವಿರುವ ಕುಟುಂಬದವರಿಗೆ ಕರಾಯ ಪ್ರೌಢ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರದಲ್ಲಿ ಅಥವಾ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲು ಸೂಚಿಸಲಾಗಿದೆ.
ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಸದಸ್ಯರಾದ ಜಯವಿಕ್ರಮ್, ಅಯೂಬ್ ಡಿ. ಕೆ., ನವೀನ್ ಕುಮಾರ್, ಅಶ್ರಫ್, ಸುಧಾ, ಕಂದಾಯ ಇಲಾಖೆಯ ಅಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.