ಉಜಿರೆ: ಉಜಿರೆ – ಬೆಳಾಲು – ಪೆರ್ಲಬೈಪಾಡಿ ಮೂಲಕ ಕೊಯ್ಯೂರು ಆದೂರ್ ಪೆರಾಲ್ ಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ ನ ಪ್ರಯಾಣಕ್ಕೆ ಚಾಲನೆ ನೀಡಲಾಯಿತು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಬಸ್ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು.
ಬಸ್ ಚಾಲಕ ಲೋಕೇಶ್ ಮತ್ತು ನಿರ್ವಾಹಕ ಕುಮಾರ್ ರವರನ್ನು ಅಭಿನಂದಿಸಲಾಯಿತು. ಉಜಿರೆ, ಬೆಳಾಲು, ಪೆರ್ಲ ಬೈಪಾಡಿ, ಬಂದಾರು ಕಡೆಯಿಂದ ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳಿಗೆ ದಾಖಲಾತಿ ಹೊಂದುವ ವಿದ್ಯಾರ್ಥಿಗಳಿಗೆ ಈ ಬಸ್ ರೂಟ್ ಪ್ರಯೋಜನಕಾರಿಯಾಗಲಿದೆ. ಅಂತೆಯೇ ಸಾರ್ವಜನಿಕರು ಕೂಡಾ ಈ ಬಸ್ ಸೌಲಭ್ಯದ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂ ರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಯ್ ಕುಮಾರ್, ಕಾಲೇಜ್ ನ ಉಪನ್ಯಾಸಕ ವೃಂದ, ಕಾಲೇಜ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಧರ್ಮಸ್ಥಳ ಕೆ.ಎಸ್. ಆರ್.ಟಿ.ಸಿ. ಡಿಪೋ ಮ್ಯಾನೇಜರ್ ರವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ದಿವಾ ಕೊಕ್ಕಡ ವಂದಿಸಿದರು.