ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.
ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತವಾದ ಕೂಡಲೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.