ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆಯು ಜೂ.1ರಂದು ಕಲ್ಮಂಜದ ಕಲ್ಲರ್ಯ ಎಂಬಲ್ಲಿರುವ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ರಜನೀಶ್ ನಾಯ್ಕರವರ ಮನೆಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸತೀಶ್ ಹೆಚ್.ಎಲ್ ರವರು ವಹಿಸಿದ್ದರು. ಸಭೆಯಲ್ಲಿ ಉಪಾಧ್ಯಕ್ಷ ಪ್ರಭಾಕರ ನಾಯ್ಕ್, ಕಾರ್ಯದರ್ಶಿಗಳಾದ ಸುರೇಶ್ ಹೆಚ್.ಎಲ್., ಕೋಶಾಧಿಕಾರಿ ಹರೀಶ್ ಪೆರಾಜೆ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ನಾಯ್ಕ್, ಮಾಧ್ಯಮ ಕಾರ್ಯದರ್ಶಿ ಶರತ್ ನಾಯ್ಕ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್, ಕಾರ್ಯಕಾರಿ ಸಮಿತಿ ಸದಸ್ಯ ರಾಘವೇಂದ್ರ ನಾಯ್ಕ್ ಹಾಗೂ ಇತರರು ಭಾಗವಹಿಸಿದ್ದರು.
ಸಭೆಯಲ್ಲಿ ವಾರ್ಷಿಕ ಮಹಾಸಭೆಯ ಬಗ್ಗೆ ಚರ್ಚಿಸಲಾಯಿತು. ವಾರ್ಷಿಕ ಮಹಾಸಭೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಸಾಧನಾ ಪುರಸ್ಕಾರ ನೀಡುವ ಬಗ್ಗೆ ಚರ್ಚಿಸಲಾಯಿತು.