Site icon Suddi Belthangady

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿಯಿಂದ ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ, ಇದರ ವತಿಯಿಂದ ಆಯೋಜಿಸಿದ ಎಸ್. ಎಸ್. ಎಲ್. ಸಿ ಯಲ್ಲಿ ಉನ್ನತ ಶ್ರೇಣಿ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು, ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ನವೀನ್ ಸಾಮಾನಿ, ಬೆಳ್ತಂಗಡಿ ವಲಯದ ಬಂಟರೆ ಯಾನೆ ನಾಡವರ ಸಂಘದ ಕಾರ್ಯದರ್ಶಿ ಅಶೋಕ್ ಶೆಟ್ಟಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ಅಧ್ಯಕ್ಷ ಕೇಶವ ಶೆಟ್ಟಿ, ಗ್ರಾಮದ ಹಿರಿಯರಾದ ಮೀನಾಕ್ಷಿ ಶೆಟ್ಟಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಬಂಟ ಮನೆಯ ಸದಸ್ಯರು ಭಾಗವಹಿಸಿದ್ದರು.

Exit mobile version