ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ ಕಾರ್ಯಕ್ರಮ: ಕಲಾಮಧು ದಂಪತಿಗಳಿಗೆ ಸನ್ಮಾನ

0

ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಜೂ.1ರಂದು ನಿವೃತ್ತ ತಾಲೂಕು ವೈದ್ಯಾಧಿಕಾರಿ ಡಾ. ಕಲಾಮಧು ಕಲ್ಯಾಣಿ ಶೆಟ್ಟಿ ಕಲ್ಮಂಜ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಡಾ. ಕಲಾಮಧು ಉಪಯುಕ್ತವಾದ ಮಾಹಿತಿಗಳನ್ನು ನೀಡಿದರು. ಕಲಾಮಧು ಮತ್ತು ಅವರ ಪತ್ನಿ ಕಲ್ಯಾಣಿ ಶೆಟ್ಟಿ ಇವರು ನೀಡಿದ ಆರೋಗ್ಯ ಹಾಗೂ ಸಾಮಾಜಿಕ ಸೇವೆಗಾಗಿ ದಂಪತಿಯವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಗರಿ ಇವರು ಸನ್ಮಾನಿತ ದಂಪತಿಗಳ ಸೇವೆಯನ್ನು ಸ್ಮರಿಸಿದರು. ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಉಪಾಧ್ಯಕ್ಷ ವಿಜಯಕುಮಾರ್ ರೈ ಶಾರದಾ ನಗರ, ಇವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಗೌರವ ಸಲಹೆಗಾರ ಪುಷ್ಪರಾಜ ರೈ ಕಲ್ಲಹಿತ್ಲು, ಕೋಶಾಧಿಕಾರಿ ಮಧುಶೆಟ್ಟಿ ಹುರ್ತಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ನಾಗಂಡ ಇವರು ಉಪಸ್ಥಿತರಿದ್ದರು. ಗ್ರಾಮ ಸಮಿತಿಯ ಬಂಧುಗಳು ಹಾಗೂ ಡಾಕ್ಟರ್ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಜೊತೆ ಕಾರ್ಯದರ್ಶಿ ನವೀತ್ ಶೆಟ್ಟಿ ಇವರು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here