ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲಾ ವಿಭಾಗದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಂಭ್ರಮದಿಂದ ವಿನೂತನವಾಗಿ ಜೂ.2ರಂದು ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ದಾಖಲಾದ ಎಲ್ಲ ವಿದ್ಯಾರ್ಥಿಗಳನ್ನು ಲೇಖನಿ ಮತ್ತು ಸಿಹಿ ನೀಡುವುದರ ಮೂಲಕ ಅತ್ಯಂತ ಪ್ರೀತಿಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯಲ್ಲಿ ದೊರೆಯುವ ಸವಲತ್ತುಗಳು ಮತ್ತು ಪೋಷಕರ ಕರ್ತವ್ಯಗಳ ಬಗ್ಗೆ ತಿಳಿ ಹೇಳಿದರು.
ಸರಕಾರದ ಸವಲತ್ತುಗಳ ಬಗ್ಗೆ ಆಂಗ್ಲ ಭಾಷಾ ಶಿಕ್ಷಕ ನಾರಾಯಣ ಗೌಡ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷ ಸೂರಪ್ಪ ಶುಭ ಹಾರೈಸಿದರು. ವೇದಿಕೆಯಲ್ಲಿ ವಿಜ್ಞಾನ ಶಿಕ್ಷಕಿ ಶೋಭಾ ಉಪಸ್ಥಿತರಿದ್ದರು. ಎಲ್ಲ ಪೋಷಕರಿಗೆ ಲಘು ಉಪಹಾರವನ್ನು ನೀಡಲಾಯಿತು. ಕನ್ನಡ ಭಾಷಾ ಶಿಕ್ಷಕಿ ಪೂರ್ಣಿಮ ಕೆ.ಕೆ. ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಶಿಕ್ಷಕ ತಾರನಾಥ, ಮಹೇಶ್ ನಿಲಜಿ, ಸಂತೋಷ್, ಪದ್ಮಜ, ಪುಷ್ಪಲತ ಸಹಕರಿಸಿದರು. ಗಣಿತ ಶಿಕ್ಷಕ ಸುರೇಶ್ ಶೆಟ್ಟಿ ಬಿ. ನಿರೂಪಿಸಿದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಕುಮುದಾ ಧನ್ಯವಾದ ಸಲ್ಲಿಸಿದರು.