ಕೊಕ್ಕಡ: ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ

0

ಕೊಕ್ಕಡ: ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ. (36ವ) ಅವರು ತಮ್ಮ ಆಟೋ ರಿಕ್ಷಾ ಚಾಲನೆಯಲ್ಲೇ ಇದ್ದ ವೇಳೆ ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿರುವ ಘಟನೆ ಜೂ.3ರಂದು ಬೆಳಿಗ್ಗೆ ಸಂಭವಿಸಿದೆ.

ಶರತ್ ಕುಮಾರ್ ಅವರು ಪ್ರತಿದಿನದಂತೆ ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು.

ವಿಷಯವನ್ನು ಗಮನಿಸಿ ಸ್ಥಳೀಯರು ಕೂಡಲೇ ಶರತ್ ರವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ ಅದಾಗಲೇ ಅವರು ನಿಧನ ಹೊಂದಿದ್ದರು.

ಮೃತರು ತಂದೆ ರಘುರಾಮ ಮಡಿವಾಳ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here