ಬಡಗಕಾರಂದೂರು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ವಿಧ್ಯಾರ್ಥಿಗಳ ಸ್ವಾಗತ-ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ಜೂ.2ರಂದು ಜರುಗಿತು.
ಭವ್ಯವಾದ ಮೆರವಣಿಗೆ ಹಾಗೂ ಪುಷ್ಪವೃಷ್ಟಿಯ ಮೂಲಕ ಶಾಲಾ ಪ್ರವೇಶ ಹಾಗೂ ಪ್ರಾರಂಭ ಮಾಡಲಾಯಿತು. ನೂತನ ವಿಧ್ಯಾರ್ಥಿಗಳಿಗೆ ಪುಷ್ಪವನ್ನಿತ್ತು ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶಶಿಕಾಂತ್ ನಾಯಕ್, ಉಪಾಧ್ಯಕ್ಷೆ ರೂಪಾ,ಶಾಲಾ ದತ್ತು ಸ್ವೀಕಾರಗೈದಿರುವ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲ, ಶಾಲಾ ಎಸ್. ಡಿ. ಎಂ. ಸಿ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಪೂಜಾರಿ ಬಿಕ್ಕಿರ, ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಹೇಮಂತ್ ಕಟ್ಟೆ, ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಎನ್., ಎಸ್. ಡಿ. ಎಂ. ಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಗಮಿಸಿದ ಗಣ್ಯರು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿ ಪಠ್ಯ ಪುಸ್ತಕಗಳನ್ನು ವಿತರಿಸಿದರು. ಸಿಹಿ ತಿನಿಸು ವಿತರಿಸಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.