ಕೊಯ್ಯೂರು: 2025-26ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸದಲ್ಲಿ ಒಂದನೇ ತರಗತಿ ಮತ್ತು ಇತರ ತರಗತಿಗಳಿಗೆ ಹೊಸದಾಗಿ ಶಾಲೆಗೆ ದಾಖಲಾತಿ ಗೊಂಡ ಮಕ್ಕಳನ್ನು ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ಶಾಲಾ ಪ್ರಾರಂಭೋತ್ಸವದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸರಬರಾದ ಉಚಿತ ಪಠ್ಯ ಪುಸ್ತಕಗಳನ್ನು ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ಹಸ್ತಾಂತರ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಇವರು ವೈಯಕ್ತಿಕವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿದರು.
ಶಾಲಾ ವಿದ್ಯಾಭಿಮಾನಿಗಳ ವಿದ್ಯಾ ಸಿರಿ ಯೋಜನೆಯ ಮೂಲಕ ಶಾಲಾ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ಹಸ್ತಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯೆ ಶಾರದಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಚಂಪಾ, ಶಾಲಾ ಪೋಷಕರು ಮತ್ತು ಶಾಲಾ ಸಹಶಿಕ್ಷಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.