Site icon Suddi Belthangady

ಮಿತ್ತೂರು ನಿವಾಸಿ ಮುಹಿಯುದ್ದೀನ್ ತಬೀರ್ ದಾರನಿ ನಿಧನ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಮಿತ್ತೂರು ನಿವಾಸಿ, ಪ್ರಸಕ್ತ ಬಜ್ಜೆ ಜರಿನಗರ ನಿವಾಸಿ ಸಾಮಾಜಿಕ ಮುಂದಾಳು ಅಬ್ದುಲ್ ಹಮೀದ್ ಎಂಬವರ ಪುತ್ರ ಮುಹಮ್ಮದ್ ತಬೀರ್ ದಾರನಿ (ವ.22) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೂ.2ರಂದು ನಿಧನರಾದರು.

ಕೇರಳದ ಚೆಮ್ಮಾಡ್ ದಾರುಲ್ ಹುದಾ ಪಿ.ಜಿ.ಯ ಅಂತಿಮ ವರ್ಷದ ಪದವಿ ಶಿಕ್ಷಣ ಪಡೆಯುತ್ತಿದ್ದ ಇವರಿಗೆ 10 ದಿವಸಗಳ ಹಿಂದೆ ಜ್ವರ ಬಾಧಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ತಂದೆ, ತಾಯಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Exit mobile version