ನೆರಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ನೆರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ತಿಗೆ ಮಂಜೂರಾದ 50,000 ರೂಪಾಯಿ ಇದರ ಮಂಜೂರಾತಿ ಪತ್ರವನ್ನು ಶಾಲೆಗೆ ಹಸ್ತಾಂತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ ಗೌಡ, ಗ್ರಾಮಾಭಿವೃದ್ಧಿ ಯೋಜನೆಯ ನೆಕ್ಕರೆ ಒಕ್ಕೂಟದ ಅಧ್ಯಕ್ಷೆ ಅಶ್ವಿನಿ, ಮೇಲ್ವಿಚಾರಕ ಗಣೇಶ್ ಮತ್ತು ಸೇವಾ ಪ್ರತಿನಿಧಿ ಸರಿತಾ ಹಾಗೂ ಶಿಕ್ಷಕ ವರ್ಗ ಮತ್ತು ಶಾಲಾಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು.