ಕೊಯ್ಯೂರು ಕಸಬ ಸ.ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

0

ಕೊಯ್ಯೂರು: ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು ದೇಶದ ಸತ್ಪ್ರಜೆಗಳಾಗಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಲು, ಪೋಷಕರು ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು” ಎಂದು ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕರೆ ನೀಡಿದರು. ಅವರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೊಯ್ಯೂರು ಕಸಬಾ – ಇಲ್ಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಶಾಲೆಗೆ ಹೊಸದಾಗಿ ದಾಖಲಾತಿ ಹೊಂದಿದ 1ನೇ ತರಗತಿಯ ಪೂರ್ವಿ ಕಾರ್ಯಕ್ರಮದ ಉದ್ಘಾಟನೆಗೈದರು. ಸರ್ಕಾರದಿಂದ ಉಚಿತವಾಗಿ ನೀಡಲ್ಪಟ್ಟ ಪಠ್ಯಪುಸ್ತಕಗಳ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ನಾಥ ಪೆರ್ಮುದೆ, ಪಾಕ್ಸ್ ನಿರ್ದೇಶಕ ಸಂಜೀವ ಮಲೆಕುಡಿಯ, ಗ್ರಾಮ ಪಂಚಾಯತ್ ಸದಸ್ಯೆ ದಿವ್ಯ ಗಾಂಜಾಲು, ಗಿರೀಶ್ ಮರಿಯ, ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಜಯಲಕ್ಷ್ಮಿ ಮತ್ತು ಸದಸ್ಯರುಗಳು, ಅಮ್ಮಂದಿರ ಸಮಿತಿಯ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಮೋಹಿನಿ ಮತ್ತು ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಜಗನ್ನಾಥ ವಹಿಸಿಕೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಸಂತಿ ಕೆ.ಎನ್. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕಿಯರಾದ ದೇವಿಬಾಯಿ ಡಿ., ಬಿ. ಸುಶ್ಮಿತಾ ರಾವ್, ವಿಜಯಶ್ರೀ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here