ವಾಣಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

0

ಬೆಳ್ತಂಗಡಿ: ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಪ್ರಬೋಧ’ ಓರಿಯಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೌವ್ವನದ ಹೊಸ್ತಿಲಲ್ಲಿ ಇರುವ ವಿದ್ಯಾರ್ಥಿಗಳು ಉತ್ಸಾಹದ ಭರದಲ್ಲಿ ತಪ್ಪು ನಿರ್ಧಾರಗಳನ್ನು ಮಾಡದೆ ಗುಣಾತ್ಮಕ ಚಿಂತನೆಗಳ ಮೂಲಕ ಯಶಸ್ಸನ್ನು ಗಳಿಸಬೇಕು. ಜೀವನದಲ್ಲಿ ಶಿಸ್ತು ಸ್ವಚ್ಛತೆಯನ್ನು ಹೊಂದಿರಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಉಪಸಿತರಿದ್ದರು. ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ ನ ತೆರಿಗೆ ವಿಭಾಗದ ಅಧಿಕಾರಿ ಸಿ. ಎ. ಸನತ್ ಕುಮಾರ್ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ನಡೆಸಿಕೊಟ್ಟರು.

ಉಪನ್ಯಾಸಕರಾದ ಸುಧೀರ್ ಕೆ.ಎನ್. ಮತ್ತು ಶಂಕರ್ ರಾವ್ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳನ್ನು ತಿಳಿಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ಉಪನ್ಯಾಸಕಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here