ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೂ.4ರಂದು ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ದಾನ ಮೈಸೂರು ಪ್ರಾಂತ್ಯ ಎಂದರೆ ಅದು ಸಮಾಜ ಸೇವೆಗೆ ಸಿದ್ದ ಎನ್ನುವಂತಿತ್ತು. ಪ್ರತಿಯೊಂದು ಕ್ಷೇತ್ರದಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯ‌ರ್ರವರು ನೀಡಿದ ಕೊಡುಗೆ ಅನನ್ಯವಾದದ್ದು ಎಂದು ತಿಳಿಸಿದರು.

ಕಾಲೇಜಿನ ಉಪನ್ಯಾಸಕ ಮಂಜು ಆರ್. ಆಡು ಮುಟ್ಟದ ಸೊಪ್ಪಿಲ್ಲ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಸೇವೆ ಸಲ್ಲಿಸದ ಕ್ಷೇತ್ರವಿಲ್ಲ ಎನ್ನುತ್ತಾ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಪರಿಚಯ, ಇತಿಹಾಸ ಮತ್ತು ಬಹುಮುಖ ಸಾಧನೆಗಳ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್. ಕೆ., ವಿದ್ಯಾಶ್ರೀ ಪಿ., ಆದ್ಯಾ ಯು. ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ವಿನುತ ಕೆ.ಒ. ಮತ್ತು ವರ್ಷ ಪಿ..ಆರ್. ಪ್ರಾಸಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಶಶಿಕಲಾ ಸ್ವಾಗತಿಸಿ, ರಶ್ಮಿ ಕೆ.ಪಿ. ನಿರೂಪಿಸಿದರು. ನಿಖಿತಾ ವಂದಿಸಿದರು.

LEAVE A REPLY

Please enter your comment!
Please enter your name here