ಕಾರಿಂಜ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರಿಂಜದಲ್ಲಿ ಶಾಲಾ ಪ್ರಾರಂಭೋತ್ಸವವು ಜೂ.3ರಂದು ಬಹಳ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ಸೇರ್ಪಡೆಕೊಂಡ ಮಕ್ಕಳನ್ನು ಮೆರವಣಿಗೆ ಮೂಲಕ ಬಲೂನ್ ಹಾಗೂ ಹೂ ಕೊಟ್ಟು ಸ್ವಾಗತಿಸಲಾಯಿತು. ಇಲ್ಲಿನ ಮುಖ್ಯ ನಿವೃತ್ತ ಶಿಕ್ಷಕರಾದ ಧರ್ಣಪ್ಪ ನಾಯ್ಕ ಇವರು ಮಕ್ಕಳಿಗೆ ಶಿಕ್ಷಣದ ಪ್ರಗತಿಗೆ ಪೂರಕವಾಗಿ ತಾವು ಮಾಡಬೇಕಾದ ಕರ್ತವ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ನಿವೃತ್ತ ಸೈನಿಕರಾದ ಜೆ.ಕೆ.ಪೂಜಾರಿಯವರು ಶಿಸ್ತಿನ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಇಲಾಖೆಯಿಂದ ಸರಬರಾಜುವಾದ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಸ್ಥಳೀಯ ದಾನಿಗಳಾದ ಓಬಯ್ಯ ಪೂಜಾರಿ, ದಾಸಪ್ಪ ಗೌಡ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು, ಅಂಗನವಾಡಿ ಕಾರ್ಯಕರ್ತರು ಶಾಲಾ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದರು.

ಮುಖ್ಯ ಶಿಕ್ಷಕಿ ಗಿರಿಜಾ ಎನ್. ಪ್ರಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು. ಸಹ ಶಿಕ್ಷಕ ಪರಮೇಶ್ವರ್ ಎಸ್. ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್. ಡಿ. ಎಂ. ಸಿ ಅಧ್ಯಕ್ಷ ಜಗನ್ನಾಥ ರೈ ಅವರು ನೆರೆದಿರುವ ಎಲ್ಲರಿಗೂ ಧನ್ಯವಾದ ತಿಳಿಸಿದರು.