ಮದ್ದಡ್ಕ: ಖಚಿತ ಮಾಹಿತಿಯ ಆಧಾರದಲ್ಲಿ ಅಬಕಾರಿ ಅಧಿಕಾರಿಗಳು ಮದ್ದಡ್ಕದ ಮಹಮ್ಮದ್ ರಫೀಕ್ ಎಂಬವನ ಮನೆ ಮೇಲೆ ದಾಳಿ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಜೂ.3ರಂದು ಬಂಟ್ವಾಳ ಉಪ ವಿಭಾಗದ ವ್ಯಾಪ್ತಿಯ ಬೆಳ್ತಂಗಡಿ ವಲಯದ ಮದ್ದಡ್ಕ ಎಂಬಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕದ ಮನೆಯ ಮೇಲೆ ಅಬಕಾರಿ ದಾಳಿ ಮಾಡಿದ್ದು, ಈ ವೇಳೆ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್ ಗಳನ್ನು ಜಪ್ತುಪಡಿಸಲಾಗಿದೆ.
ಪ್ರಕರಣದ ಆರೋಪಿತನಾದ ಮಹಮ್ಮದ್ ರಫೀಕ್ ಎಂಬುವನು ಪರಾರಿ ಆಗಿದ್ದಾನೆ. ಆರೋಪಿಯ ವಿರುದ್ಧ NDPS ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ. ದಾಳಿಯಲ್ಲಿ ಬಂಟ್ವಾಳ ಉಪ ವಿಭಾಗದ ನಿರೀಕ್ಷಕರಾದ ನವೀನ್ ಕುಮಾರ್, ಉಪನಿರೀಕ್ಷಕ ಗಿರೀಧರ ಮಜಕರ್ ಹಾಗೂ ಬೆಳ್ತಂಗಡಿ ವಲಯ ಕಚೇರಿಯ ನಿರೀಕ್ಷಕರಾದ ಲಕ್ಷ್ಮಣ ಉಪ್ಪಾರ, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಪೇದೆಗಳಾದ ಶ್ರೀನಿವಾಸ್, ಕೃಷ್ಣ ಅಗಸರ, ಭೋಜ, ವಿನೊಯ್ ವಾಹನ ಚಾಲಕ ಕೇಶವ್ ನಾಯ್ಕ, ನವೀನ್ ಭಾಗವಹಿಸಿರುತ್ತಾರೆ. ಸದ್ರಿ ಪ್ರಕರಣವನ್ನು ನವೀನ ಕುಮಾರ್ ನಿರೀಕ್ಷಕರು ಬಂಟ್ವಾಳ ಉಪವಿಭಾಗ ದಾಖಲಿಸಿಕೊಂಡಿದ್ದು, ಸದ್ರಿ ಆಸಾಮಿಯು ಹಳೆಯ ಆರೋಪಿಯಾಗಿದ್ದು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುತ್ತಾನೆ.