ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು. ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ ಮಂಡಳಿಯ ನಿರ್ದೇಶಕಿ ಸಹನ, ಶೈಕ್ಷಣಿಕ ಸಂಯೋಜಕರಾದ ನಿಶಾ, ಶ್ರುತಿ, ಆಡಳಿತಧಿಕಾರಿ ಶಾಂತಿರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾ ದೇಗುಲಕ್ಕೆ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾಗಿದ್ದ ಗೌರವಾನ್ವಿತ ಕೆ.ಎಸ್. ಹೆಗ್ಡೆಯವರು ‘ಬದುಕಿನಲ್ಲಿ ಗಳುಸುವ ಬಹಳ ದೊಡ್ಡ ಸಂಪತ್ತು ಅಂದರೆ ವಿದ್ಯೆ. ಅಂಥ ವಿದ್ಯೆಯನ್ನು ಕಲಿಯಲು ಯೋಗ್ಯ ಶಾಲೆಯನ್ನು ಆರಿಸಿಕೊಂಡ ತಮಗೆ ಶುಭವಾಗಲಿ’ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕಿ ಸುಜಾತ ವಿದ್ಯಾರ್ಥಿಗಳಿಗೆ ಶಾಲಾ ನೀತಿ ನಿಯಮಗಳನ್ನು ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಎಲ್ಲಾ ಸಿಬ್ಬಂದಿವರ್ಗದವರು, ಪೋಷಕರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.