ಕೊಕ್ಕಡ: ಪರಿಸರ ದಿನಾಚರಣೆ ಕೇವಲ ಗಿಡ ನೆಡುವುದಕ್ಕೆ ಮಾತ್ರ ಸೀಮಿತವಾಗಿರದೆ, ನೆಟ್ಟ ಗಿಡವನ್ನು ಸರಿಯಾದ ರೀತಿಯಲ್ಲಿ ಪೋಷಿಸಿ, ಅದರಿಂದ ಶುದ್ಧವಾದ ಗಾಳಿ, ಆಹಾರ ಸಿಗುವಂತೆ ಆಗಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನೈತಿಕ ಮತ್ತು ಆಧ್ಯಾತ್ಮಿಕ ಹಾಗೂ ಮೌಲ್ಯ ಶಿಕ್ಷಣ ವಿಭಾಗದ ಪರಿವೀಕ್ಷಕಿ ಮೀನಾಕ್ಷಿ ನುಡಿದರು.
ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ತಂದಿರುವ ಗಿಡವನ್ನು ನೆಟ್ಟು ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಾತನಾಡಿ, ವಿದ್ಯಾರ್ಥಿಗಳು ಓದು ಬರಹದ ಜೊತೆಗೆ ಮನೆಯ ಹಾಗೂ ಶಾಲೆಯ ಪರಿಸರದಲ್ಲಿ ಗಿಡವನ್ನು ನೆಟ್ಟು ಬೆಳೆಸಿ ಹಸಿರು ಪರಿಸರವನ್ನು ಉಸಿರಾಗಿಸಿಕೊಳ್ಳಬೇಕು ಎಂದರು.
ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಜೊತೆಗಿದ್ದರು.