ಕೊಕ್ಕಡ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ವಿದ್ಯಾರ್ಥಿಗಳ ಪ್ರಾರಂಭೋತ್ಸವವು ಜೂ. 5ರಂದು ನಡೆಯಿತು.

ಶಾಲಾ ಶಿಕ್ಷಕಿಯರು ಆರತಿ ಬೆಳಗಿ ಮಕ್ಕಳನ್ನು ಬರಮಾಡಿಕೊಂಡರು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನೈತಿಕ ಮತ್ತು ಆಧ್ಯಾತ್ಮಿಕ ಹಾಗೂ ಮೌಲ್ಯ ಶಿಕ್ಷಣ ಪರಿವೀಕ್ಷಕಿ ಮೀನಾಕ್ಷಿ ಮಾತಾಜಿ ಪುಟಾಣಿಗಳಿಗೆ ತಿಲಕ ಧಾರಣೆ ಮಾಡಿದರು.

ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಕ್ಕಳಿಗೆ ಸಿಹಿ ನೀಡಿದರು. ನರ್ಸರಿ ವಿಭಾಗದ ಮೇಲ್ವಿಚಾರಕಿ ಸ್ವಾತಿ ಕೆ. ವಿ. ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಸಹಕರಿಸಿದರು. ವಿದ್ಯಾರ್ಥಿಗಳ ಪೋಷಕರು ಜೊತೆಗಿದ್ದರು.