ಬಕ್ರೀದ್, ಮತ್ತಿತರ ಹಬ್ಬಗಳಲ್ಲಿ ಪ್ರಾಣಿಗಳ ಹತ್ಯೆ ನಿಷೇಧ: ವಿ.ಹಿಂ.ಪ. ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

0

ಬೆಳ್ತಂಗಡಿ: ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆಯ ಅನ್ವಯ ಹಾಗೆಯೇ ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್ ಮತ್ತಿತರ ಹಬ್ಬ ಸಂದರ್ಭಗಳಲ್ಲಿ ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಜೂ.5ರಂದು ಪೊಲೀಸರಿಗೆ ಮನವಿ ಮಾಡಿದೆ.

ಮನವಿಯಲ್ಲಿ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲು ಮಾಡಲು ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ) ನಿಷೇಧವಿರುತ್ತದೆ.

ಸುಪ್ರೀಂ ಕೋರ್ಟ್ WP (Civil ) 309:2003 ದಿನಾಂಕ 30.01.2014 06.01.2009 WP 1443 / 2008 ಹಾಗೂ ಕಾಲ ಕಾಲಕ್ಕೆ ಸರಕಾರ ವಿವಿಧ ಆದೇಶಗಳಂತೆ ರಾಜ್ಯದಲ್ಲಿ ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ಟಾಗಿ ತಡೆಯಲು ನಾವು ಮನವಿ ಮಾಡುತ್ತಿದ್ದೇವೆ. ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ ಸೂರ್ಯಾಸ್ತದಿಂದ ಸೂರ್ಯೋದಯವರೆಗೆ ಕಾಲ್ನಡಿಗೆಯಲ್ಲಿ ಜಾನುವಾರು ಸಾಗಾಟ ನಿಷೇಧವಿದ್ದು ಹಾಗಾಗಿ ಈ ಸಮಯದಲ್ಲಿ ಸಾಗಾಟ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು. ಅದನ್ನು ಉಲಂಘಿಸಿ ಕಿವಿಯೋಲೆ ಇಲ್ಲದ ಶೇಖರಿಸಿಟ್ಟ, ಮೇಯಲು ಬಿಟ್ಟ, ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆಯ ಮೇಲೆ ನಿಗಾ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆಯ ಮೇಲೆ ನಿಗಾ ಇಡುತ್ತಾ, ಪ್ರಾರ್ಥನಾ ಮಂದಿರಗಲ್ಲಿಯೂ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಲು ಸೂಚಿಸಬೇಕು. ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದೆ. ಆದರೆ ಮೊದಲೇ ಪೊಲೀಸರು ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆ ತಡೆಯಲು ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲ ಕಾರ್ಯಗಳಲ್ಲಿ ಕಾನೂನು ಪ್ರಕಾರವಾಗಿ ತಮಗೆ ಸಹಕರಿಸಲು ನಮ್ಮ ಕಾರ್ಯಕರ್ತರು ಸದಾ ಸಿದ್ಧರಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಚಾರ್ಮಾಡಿ ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ ದಿನೇಶ್, ವಿಶ್ವ ಹಿಂದೂ ಪರಿಷದ್ ಗೋ ರಕ್ಷಾ ಪ್ರಮುಖ್ ಪುತ್ತೂರು ಜಿಲ್ಲೆ, ವಿಷ್ಣು ಮರಾಠೆ ಅಧ್ಯಕ್ಷ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಗಣೇಶ್ ಕಳೆಂಜ, ಗೋರಕ್ಷಾ ಪ್ರಮುಖ್ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ರಮೇಶ್ ಧರ್ಮಸ್ಥಳ, ಪ್ರಚಾರ ಪ್ರಸಾರ ಪ್ರಮುಖ್ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ನಾಗೇಶ್ ಕಲ್ಮಂಜ, ಸತ್ಸಂಗ ಪ್ರಮುಖ್ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಅಶೋಕ್ ಕಳೆಂಜ, ಮಾತೃಮಂಡಳಿ ಪ್ರಮುಖ್ ಬೆಳ್ತಂಗಡಿ ಪ್ರಖಂಡ ಕಾವ್ಯ ಬೆಳ್ತಂಗಡಿ, ಬಜರಂಗದಳ‌ ಸಂಚಾಲಕ ಗ್ರಾಮ ಸಮಿತಿ ಕಳೆಂಜ ಚಂದ್ರ ಕಳೆಂಜರವರು ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here