ಕಕ್ಯಪದವು: ಜೂ.5ರಂದು ಎಲ್. ಸಿ. ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪರಿಸರ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಪರಿಸರ ದಿನದ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿವಿಧ ಗಿಡಗಳನ್ನು ನೀಡಿ, ಅದರ ಪರಿಚಯವನ್ನು ಮಾಡಿ ಉಪಯೋಗವನ್ನು ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಆಯಾ ಶಿಕ್ಷಕರೊಂದಿಗೆ, ಶಾಲಾ ಉದ್ಯಾನದಲ್ಲಿ, ಹೂವಿನ ಗಿಡ, ಔಷಧಿ ಗಿಡ ಹಾಗೂ ಹಣ್ಣಿನ ಗಿಡಗಳನ್ನು ಸೇರಿದಂತೆ ವಿವಿಧ ಮರಗಳನ್ನು ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.

ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಮೀಸಲಾಗದೆ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕಾಳಜಿಯನ್ನು ವಹಿಸುವುದು ಮತ್ತು ಇತರರಲ್ಲಿಯೂ ಜಾಗೃತಿಯನ್ನು ಮೂಡಿಸುವ ಅಗತ್ಯತೆಯ ಬಗ್ಗೆ ಮನ ಮುಟ್ಟುವಂತೆ ತಿಳಿಸಲಾಯಿತು. “ಇರುವುದೊಂದೇ ಭೂಮಿ: ಇದರ ರಕ್ಷಣೆ ನಮ್ಮೆಲ್ಲರ ಹೊಣೆ” ಎಂಬ ಧ್ಯೇಯ ವಾಕ್ಯದೊಂದಿಗೆ ಎಲ್ಲರೂ ಪರಿಸರ ದಿನದ ಮಹತ್ವವನ್ನು ತಿಳಿದುಕೊಂಡರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ವಿಜಯಾ ಕೆ., ಸಂಸ್ಥೆಯ ಸಂಯೋಜಕರು ಯಶವಂತ್ ಜಿ. ನಾಯಕ್ ಹಾಗೂ ಬೋಧಕ, ಬೋಧಕೇತರ ವರ್ಗ ಉಪಸ್ಥಿತರಿದ್ದರು.