ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿಧ್ಯಾರ್ಥಿ ಗಳಿಂದ ವಿಶಿಷ್ಟ ರೀತಿಯಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಸಂಪೂರ್ಣ ಸಮವಸ್ತ್ರ ಧರಿಸಿಕೊಂಡು ಶಾಲೆಯ ಮುಂದೆ ಪರಿಸರ ಸಂರಕ್ಷಣೆಯ ಘೋಷಣೆಯನ್ನು ಕೂಗುತ್ತ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.

ಮಕ್ಕಳಿಗೆ ಪರಿಸರ ಗೀತೆಯನ್ನು ರಾಗಬದ್ಧವಾಗಿ ಹಾಡಿಸಲಾಯಿತು. ಶಾಲೆಯ ಆವರಣದಲ್ಲಿ ಇರುವಂತಹ ಹೂವಿನ ಗಿಡಗಳಿಗೆ ನೀರು ಗೊಬ್ಬರ ಹಾಕಿ ಸಲಹುವ ಸಂದೇಶ ನೀಡಿದರು. ಕೇವಲ ಗಿಡಗಳನ್ನು ನೆಟ್ಟರೆ ಸಾಲದು ಅದರಲ್ಲಿ ಇರುವ ಕಳೆಯನ್ನು ಕಿತ್ತು ಹೇಗೆ ಕಾಪಾಡಬೇಕು ಎಂದು ತಿಳಿದುಕೊಂಡರು. ಅವರಿಗೆ ಕಬ್ ಮಾಸ್ಟರ್ ಅಮೃತ ವಿ.ಶೆಟ್ಟಿ ಮಾಹಿತಿಯನ್ನು ನೀಡಿದರು. ಫ್ಲಾಕ್ ಲಿಡರ್ ಸೌಮ್ಯ ಎಂ. ಸುಮಾರು ಹದಿನಾರು ಗಿಡಗಳನ್ನು ಕೊಠಡಿಯಲ್ಲಿ ಇಟ್ಟು ಹೆಸರು ಬರೆದು ನಂತರ ಮಕ್ಕಳು ಅದನ್ನು ವೀಕ್ಷಿಸಿ ನೆನಪಿನ ಶಕ್ತಿಯ ಸ್ಪರ್ಧೆಯನ್ನು ವ್ಯವಸ್ಥೆ ಮಾಡಿದರು.

ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ.ವಿ.ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಬ್ ಮಾಸ್ಟರ್ ಹೇಮಾವತಿ ಜೈನ್ ಕಾರ್ಯಕ್ರಮದ ಯಶಸ್ವಿಗೆ ಕೈ ಜೋಡಿಸಿದರು.