Site icon Suddi Belthangady

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

ಕನ್ಯಾಡಿ: ಬೆಂಗಳೂರಿನ ಬಾಷ್ ಕಂಪೆನಿಯ ಹೆಚ್.ಆರ್. ಮ್ಯಾನೇಜರ್ ಪ್ರದೀಪ್ ಮತ್ತು ತಂಡದವರು ಜೂ.5ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಾಮಗಾರಿಯನ್ನು ವೀಕ್ಷಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗತೆ ಮತ್ತು ನಿರ್ವಹಣೆ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ನ ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್, ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ.ವಿನಾಯಕ ರಾವ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version