Site icon Suddi Belthangady

ಅರಣ್ಯ ಇಲಾಖೆ ವತಿಯಿಂದ ನಿಡ್ಲೆ ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ

ನಿಡ್ಲೆ: ವಿಶ್ವ ಪರಿಸರ ದಿನದ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಇಲ್ಲಿಯ ಪ್ರೌಢ ಶಾಲೆಯ ಆವರಣದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ವಿಭಾಗದ ಪ್ರೊಫೆಷನಲ್ ಎ.ಸಿ.ಎಫ್ ಹಸ್ತ ಶೆಟ್ಟಿಯವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಗೆ ವಿವಿಧ ಬಗೆಯ ಗಿಡಗಳನ್ನು ಅರಣ್ಯ ಇಲಾಖೆಯ ವತಿಯಿಂದ ವಿತರಿಸಲಾಯಿತು. ಕೊಕ್ಕಡ ಶಾಖೆ ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಆಚಾರ್ಯ, ನಿಡ್ಲೆ ಗಸ್ತು ಅರಣ್ಯ ಪಾಲಕ ಸುನಿಲ್ ನಾಯ್ಕ್, ಶಾಲಾ ಎಸ್. ಡಿ. ಎಂ. ಸಿ ಸದಸ್ಯ ಲಕ್ಷ್ಮಣ್, ಶಾಲಾ ಮುಖ್ಯ ಶಿಕ್ಷಕಿ ಶಾಂತ ಶೆಟ್ಟಿ, ನಿವೃತ ಶಿಕ್ಷಕ ರಾಜ್ ಗುರು ಹೆಬ್ಬಾರ್, ಶೌರ್ಯ ವಿಪತ್ತು ತಂಡದ ಸದಸ್ಯರು ಅರಣ್ಯ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Exit mobile version