ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ತರಗತಿಗೆ ಸೇರಿರುವ ಹೊಸ ವಿದ್ಯಾರ್ಥಿಗಳಿಗಾಗಿ ಪರಿಚಯ ಹಾಗೂ ಓರಿಯಂಟೇಶನ್ ಕಾರ್ಯಕ್ರಮವು ಜೂ. 6ರಂದು ನಡೆಯಿತು.
ಕಾರ್ಯಕ್ರಮದ ಪ್ರಮುಖ ವಕ್ತಾರರಾಗಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣದ ಮಹತ್ವ, ಉತ್ತಮ ಅಧ್ಯಯನ ಪದ್ದತಿಗಳು, ನಿರ್ಣಯ ಕ್ಷಮತೆ ಹಾಗೂ ಜವಾಬ್ದಾರಿಯುತ ಬದುಕಿನ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿ,
ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯದ ಗುರಿಗಳನ್ನು ರೂಪಿಸುವ ತಿರುವು ಬಿಂದುವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಬೇಕು, ಎಂದು ಮಾರ್ಗದರ್ಶನ ನೀಡಿದರು.