Site icon Suddi Belthangady

ಕಾಡಾನೆ ದಾಳಿ: ರಕ್ಷಿತ್ ಶಿವರಾಂ ಭೇಟಿ

ಧರ್ಮಸ್ಥಳ: ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೋಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಜೂ.7ರಂದು ಭೇಟಿ ನೀಡಿದರು.

ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾದ ಅವರು ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡರು. ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಪಿ.ವಿ. ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

Exit mobile version