ಬೆಳ್ತಂಗಡಿ: ದೀಪಾ ಗೋಲ್ಡ್ ಬೆಳ್ತಂಗಡಿ ಇಲ್ಲಿನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಣೆಮಂಗಳೂರು ಪ್ರಸಾದ್ ಪೈ ( 50) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ದೀಪಾ ಗೋಲ್ಡ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತಿದ್ದ ಪ್ರಸಾದ್ ಪೈ ಅವರು ಕಳೆದ ವಾರ ಹೃದಯಾಘಾತಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಜೂ. 7ರಂದು ನಿಧನರಾಗಿದ್ದಾರೆ.ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.