Site icon Suddi Belthangady

ಉಜಿರೆ ಮೂರು ಅಂಗಡಿಗೆ ನುಗ್ಗಿದ ಕಳ್ಳರು: ನಗದು ದೋಚಿ ಪರಾರಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ: ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಜನಾರ್ಧನ ದೇವಸ್ಥಾನಕ್ಕೆ ಹೋಗುವ ದ್ವಾರದ ಮುಂಭಾಗದಲ್ಲಿರುವ ಮೂರು ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿ ಪರಾರಿಯಾಗಿರುವ ಘಟನೆ ಜೂ.7ರಂದು ಮಧ್ಯರಾತ್ರಿ ನಡೆದಿದೆ.

ಅಂಗಡಿ ಮಾಲೀಕರು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವ ಸಂಚಿನಂತೆ ಅಂದು ಮಧ್ಯರಾತ್ರಿ ಬಂದ ಕಳ್ಳ ಅಂಗಡಿ ಹಿಂಬದಿಯಿಂದ ಕಾಂಪೌಂಡು ಹಾರಿ ಬಂದಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಲಾಜಿ ಎಂಟರ್ ಪ್ರೈಸಸ್ ನಿಂದ 30000 ನಗದು ಮತ್ತು ಗ್ಲಾಸ್ ಹೊಡೆದು ಶ್ರೀ ಗಣೇಶ ಇಲೆಕ್ಟ್ರಿಕಲ್ ಹಾಗೂ ಹಳೆಯ ಮಧುರ ಪ್ರಿಂಟರ್ಸ್‌ಗೆ ನುಗ್ಗಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ ಮೂರು ಅಂಗಡಿ ಕೋಣೆಗಳು ಒಂದಕ್ಕೊಂದು ಹತ್ತಿರವಿದೆ ಕೆಲವೇ ನಿಮಿಷಗಳಲ್ಲಿ ದೋಚಿ ಅಲ್ಲಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version