ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೇರಾಲ್ ಕೊಯ್ಯೂರು ಇಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಊರಿನ ಪ್ರಗತಿಪರ ಕೃಷಿಕರು, ಹಿರಿಯರು, ಭಜನಾ ಮಂಡಳಿಯ ಪ್ರಧಾನ ಪೋಷಕರು ಆದ ಪ್ರಚಂಡ ಭಾನು ಭಟ್ ಪಾಂಬೆಲು ಇವರು ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ಚಂದ್ರಾವತಿ, ಭಜನಾ ಮಂಡಳಿಯ ಅಧ್ಯಕ್ಷ ರೋಹಿತಾಶ್ವ ಉಮಿಯ ದರ್ಕಾಸು, ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಗೌಡ ಬಚ್ಚಿರೆದಡಿ, ಉಪಾಧ್ಯಕ್ಷ ಸುಂದರ ಗೌಡ ಕಜೆಕೋಡಿ, ಕಾರ್ಯದರ್ಶಿ ಓಬಯ್ಯ ನಾಯ್ಕ ಆದರ್ಶ ನಗರ, ಕೋಶಾಧಿಕಾರಿ ಬಾಲಕೃಷ್ಣ ಸಾಲ್ಯಾನ್ ಆದರ್ಶ ನಗರ, ಲೆಕ್ಕಪರಿಶೋಧಕ ಲಿಂಗಪ್ಪ ಗೌಡ ಬೆರ್ಕೆ, ಹೇಮಂತ ಗೌಡ ದೇಂತ್ಯಾರು ಬೊಟ್ಟು, ಮಾಜಿ ಕಾರ್ಯದರ್ಶಿ ಮನೋಜ್ ಕಜೆ, ಭಜನಾ ಮಂದಿರದ ಅರ್ಚಕ ಹೇಮಂತಗೌಡ ನಾಗನೋಡಿ ಹಾಗೂ ಭಜನಾ ಮಂಡಳಿಯ ಹಿರಿಯ ಹಿರಿಯ ಭಜಕ ಸದಸ್ಯರುಗಳು ಉಪಸ್ಥಿತರಿದ್ದರು.