ಕಾಪಿನಡ್ಕ ಶಾಲೆಯಲ್ಲಿ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ಹಸ್ತಾಂತರ

0

ಬಳಂಜ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 558 ನೇ. ಸೇವಾ ಯೋಜನೆ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಪಿನಡ್ಕ ಬಳಂಜ ಮಕ್ಕಳಿಗೆ ಉಚಿತ ಪುಸ್ತಕ ಮತ್ತು ಬ್ಯಾಗ್ ವಿತರಣೆ ಜೂ.8ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪುಸ್ತಕ ಮತ್ತು ಬ್ಯಾಗ್ ವಿತರಣೆ ಮಾಡಿ ಮಾತನಾಡಿದ ಪತ್ರಕರ್ತ, ಬಳಂಜ ಶಿಕ್ಷಣ ಟ್ರಸ್ಟ್ ನ ಅದ್ಯಕ್ಷ ಮನೋಹರ್ ಬಳಂಜ ಮಾತನಾಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಊರಿನ ಸಂಘ ಸಂಸ್ಥೆಗಳು ಮತ್ತು ಹಳೆವಿದ್ಯಾರ್ಥಿಗಳದ್ದು. ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಸರಕಾರದ ಅನೇಕ ಸೌಲಭ್ಯಗಳು ಸಿಗುತ್ತಿದೆ. ಮಕ್ಕಳ ಸಂಖ್ಯೆ ಕಡಿಮೆಯಾದರೆ ಮಾತ್ರ ಅನುದಾನ ಕಡಿತವಾಗುತ್ತದೆ. ಆಗ ಸಂಘ ಸಂಸ್ಥೆಗಳು ಕೈ ಜೊಡಿಸಿದಾಗ ಮಕ್ಕಳಿಗೆ ನೆರವಾಗುತ್ತದೆ. ರಾಜಕೇಸರಿ ಸಂಘಟನೆ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ನೊಂದವರಿಗೆ ನೆರವು, ಸರಕಾರಿ ಶಾಲೆಯ ಅಭಿವೃದ್ಧಿ ಸರಕಾರಿ ಆಸ್ಪತ್ರೆಗಳಲ್ಲಿ ಸೇವೆ ಇನ್ನಿತರ ಸಮಾಜಮುಖಿ ಕಾರ್ಯ ಮಾಡುತ್ತಿದ್ದು ಇದು ನೈಜ ಸಮಾಜಸೇವೆಯಾಗಿದೆ. ಇವರೊಂದಿಗೆ ಇನ್ನಷ್ಟು ದಾನಿಗಳು ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಸಂಚಾಲಕ ಜಗದೀಶ್ ಲಾಯಿಲ, ಸಹ ಸಂಚಾಲಕ ಶರತ್ ಕರಾಯ, ಸಾಮಾಜಿಕ ಜಾಲತಾಣದ ಸಂಪತ್, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಕ್ರೀಡಾ ಕಾರ್ಯದರ್ಶಿ ವಿನೋದ್ ಲಾಯಿಲ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗ ಕಾಪಿನಡ್ಕ ಇದರ ಕಾರ್ಯದರ್ಶಿ ಯತೀಶ್, ಶಿಕ್ಷಕಿ ಅನಿತಾ ಮತ್ತು ಮಕ್ಕಳ ಪೋಷಕರು ಉಪಸ್ಥಿತಿತರಿದ್ದರು. ಎಲ್ಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ಪೆನ್ ವಿತರಿಸಲಾಯಿತು. ಶಿಕ್ಷಕಿ ಶಾಂತಿವಾಸ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಅನುಷಾ ವಂದಿಸಿದರು.

LEAVE A REPLY

Please enter your comment!
Please enter your name here