Site icon Suddi Belthangady

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ನಡೆಯುವ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆಯು ನಾವರ ದೇವಸ್ಥಾನದ ನೂತನ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷ ಚಂದಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಇಂದಿನ ಸಭೆಯ ಜವಾಬ್ದಾರಿ ವಹಿಸಿರುವ ದಿವ್ಯಶ್ರೀ ಸ್ವ ಸಹಾಯ ಸಂಘದ ಎಲ್ಲಾ ಸದಸ್ಯರು ದೀಪ ಪ್ರಜ್ವಲಿಸುವುದರ ಮೂಲಕ ಒಕ್ಕೂಟ ಸಭೆಯನ್ನು ಆರಂಭ ಮಾಡಿದರು. ಇಂದಿನ ಸಮಾರಂಭದಲ್ಲಿ ನಾರಾವಿ ವಲಯ ಜನಜಾಗ್ರತಿ ಸಮಿತಿಯ ಅಧ್ಯಕ್ಷ ನಿತ್ಯಾನಂದ ಎನ್. ನಾವರ, ಆಂತರಿಕ ಲೆಕ್ಕಪರಿಶೋಧಕ ಶೇಖರ, ಒಕ್ಕೂಟದ ಕಾರ್ಯದರ್ಶಿ ಎನ್. ವೀರೇಂದ್ರ ಕುಮಾರ್ ಜೈನ್, ಸೇವಾ ಪ್ರತಿನಿಧಿ ಪುಷ್ಪಾವತಿ, ಒಕ್ಕೂಟದ ಜೊತೆ ಕಾರ್ಯದರ್ಶಿ ನಳಿನಾಕ್ಷಿ, ಕೋಶಾಧಿಕಾರಿ ಹರೀಶ್ ಮೂಲ್ಯ, ಜನಜಾಗ್ರತಿ ಗ್ರಾಮ ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ಎನ್. ವಿಜಯಕುಮಾರ್ ಜೈನ್ ಇವರು ಮಾತನಾಡಿ ಜೂ.14ರಂದು ಅಳದಂಗಡಿಯಲ್ಲಿ ನಡೆಯುವ ಸರಕಾರಿ ಕೆಲಸದಿಂದ ನಿವೃತ್ತರಾಗಿರುವ ಶಿವಪ್ರಸಾದ್ ಅಜಿಲರ ಪೌರ ಸನ್ಮಾನದ ಬಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಬಗ್ಗೆ, ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸಿದ್ದಪ್ಪ ಮೂಲ್ಯ ಇವರು ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.

Exit mobile version