ಉಜಿರೆ: “ಕೆಟ್ಟ ಅಭ್ಯಾಸಗಳು ಮನುಷ್ಯನನ್ನು ಸುಲಭವಾಗಿ ಅಂಟಿಕೊಳ್ಳುತ್ತದೆ. ಆದರೆ ಅದನ್ನು ಬಿಡಲು ಕಷ್ಟ ಪಡಬೇಕಾಗುತ್ತದೆ. ತನ್ನಲ್ಲಿರುವ ಅಹಂಕಾರ ಹಾಗೂ ದುಶ್ಚಟ ದೂರ ಮಾಡಿದಾಗ ಮಾತ್ರ ಸಂಸಾರದಲ್ಲಿ ಹಾಗೂ ಸಮಾಜದಲ್ಲಿ ಒಬ್ಬ ವ್ಯಕ್ತಿ ಗೌರವಯುತವಾಗಿ ಬದುಕಲು ಸಾಧ್ಯ. ಕುಡಿತದಿಂದ ಆರೋಗ್ಯ ಹಾಳಾಗುವುದರೊಂದಿಗೆ ಮನುಷ್ಯನ ಆಯುಷ್ಯ ಕಡಿಮೆಯಾಗುತ್ತದೆ. ದೃಢವಾದ ಸಂಕಲ್ಪದಿಂದ ಮತ್ತು ಮನಃಪರಿವರ್ತನೆಯಿಂದ ದುಶ್ಚಟ ದೂರ ಮಾಡಲು ಸಾಧ್ಯ. ಮದ್ಯವರ್ಜನ ಶಿಬಿರದ ಮೂಲಕ ಶಿಬಿರಾರ್ಥಿಗಳಿಗೆ ಪ್ರೇರಣೆ ಕೊಟ್ಟು ಮನಃಪರಿವರ್ತನೆ ಮಾಡಲಾಗುತ್ತಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಜೂ.7ರಂದು ಉಜಿರೆ ಲಾಯಿಲದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 249ನೇ ವಿಶೇಷ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಶಿಬಿರದಲ್ಲಿ ರಾಜ್ಯದ ವಿವಿಧ ಕಡೆಗಳಿಂದ 57 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಹೆಗ್ಗಡೆಯವರ ಕಛೇರಿ ಪ್ರಬಂಧಕ ರಾಜೇಂದ್ರ ದಾಸ್ ಉಪಸ್ಥಿತರಿದ್ದರು. ಶಿಬಿರದಲ್ಲಿ ರಾಜ್ಯದ ವಿವಿಧ ಕಡೆಗಳಿಂದ 57 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್, ಆಡಳಿತ ಯೋಜನಾಧಿಕಾರಿಗಳಾದ ಮಾಧವ ಗೌಡ, ಶಿಬಿರಾಧಿಕಾರಿ ವಿದ್ಯಾಧರ್, ರಮೇಶ್, ಜಯಾನಂದ, ಆರೋಗ್ಯ ಸಹಾಯಕ ಫಿಲೋಮಿನಾ ಡಿ’ಸೋಜ, ಶಿಬಿರದ ಆಪ್ತ ಸಲಹೆಗಾರ ಮಧು ಜಿ.ಆರ್. ಹಾಗೂ ಹಾಗೂ ಜಾಗೃತಿ I ಸೌಧದ ಪ್ರಬಂಧಕ ಕಿಶೋರ್ ಕುಮಾರ್ ಸಹಕರಿಸಿರುತ್ತಾರೆ.