ಬೆಳ್ತಂಗಡಿ: ತಾಲೂಕು ಕಳಿಯ ಗ್ರಾಮದ ಸುಣ್ಣಲಡ್ಡ ಎಂಬಲ್ಲಿ ಆಸಿಫ್ ಎಂಬವರ ಮನೆಗೆ ಜೂ.9ರಂದು ತಡರಾತ್ರಿ ಯಾರೋ ಕಳ್ಳರು ನುಗ್ಗಿ ಗೋದ್ರೆಜ್ ನಲ್ಲಿಟ್ಟಿದ್ದ ದಾಖಲೆ ಪತ್ರ, ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿಗೊಳಿಸಿ ನಗದು ಕಳ್ಳತನ ನಡೆಸಿದ್ದಾರೆ.
ಗೋದ್ರೇಜ್ ನ ಬಾಗಿಲು ತೆರೆಯುವ ಶಬ್ದ ಕೇಳಿ ಅಲ್ಲೇ ಮಲಗಿದ್ದ ಆಸಿಫ್ ಗೆ ಎಚ್ಚರವಾದಾಗ ಕಳ್ಳನು ಹಿಂದಿನ ಬಾಗಿಲಿನಿಂದ ಓಡಿ ಪರಾರಿಯಾಗಿದ್ದಾನೆ. ತಕ್ಷಣ ಮನೆ ಮಾಲೀಕರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಮತ್ತು ಅರ್ಶದ್ ರವರಿಗೆ ಮಾಹಿತಿ ನೀಡಿ ಅವರು ರಾತ್ರಿಯೇ ಬಂದು ಪೋಲಿಸರಿಗೆ ಮಾಹಿತಿ ನೀಡಿದರು.
ಬೆಳ್ತಂಗಡಿ ಪೊಲೀಸರು ರಾತ್ರಿಯೇ ಬಂದು ಪರಿಶೀಲನೆ ನಡೆಸಿದರು. ಬೆಳಿಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದರು. ಇನ್ಸ್ ಪೆಕ್ಟರ್ ಸುಬ್ಬಾಪುರ ಮಠ ಭೇಟಿ ನೀಡಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ತನಿಖೆ ಮುಂದುವರೆಯುತ್ತಿದೆ.