ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ

0

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಅಮ್ಮಾಜಿ ಪೂಜಾರಿ ಹಿರ್ತೊಟ್ಟು ಇವರ ಮನೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಡಾ. ಯೋಗೀಶ್ ಕುಮಾರ್ ಕೈರೋಡಿ ಇವರು ಮಾತನಾಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಘಟನೆ ಮಾಡುತ್ತಿರುವ ಕೆಲಸ ಶ್ಲಾಘನೀಯ ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ಪಾಲಿಸಿಕೊಂಡು ಬಂದಿರುವ ಸಂಘಟನೆ ನಿಜಕ್ಕೂ ಸಮಾಜಕ್ಕೆ ಮಾದರಿ ಮಕ್ಕಳು ಸೇವಾ ಮನೋಭಾವನೆಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ಕೀರ್ತಿವಂತರಾಗಿ ಬಾಳಿ ಎಂದು ಕರೆ ನೀಡಿದರು.

ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ.ಅನಿತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ನವೀನ್ ಜೆ. ಬುಳೆಕ್ಕರ ಅಧ್ಯಕ್ಷತೆ ವಹಿಸಿ ಸಂಘದ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಧಾರ್ಮಿಕ ಮುಖಂಡರಾದ ಜನಾರ್ದನ ಪೂಜಾರಿ ಕಡ್ತಿಲ ಉಪಸ್ಥಿತರಿದ್ದರು. ಸಂಘಟನೆಯ ನಿಕಟಪೂರ್ವ ಅಧ್ಯಕ್ಷ ರತ್ನಾಕರ್ ಸಾಲ್ಯಾನ್ ಅಂಕರ್ಜಾಲು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಕುಕ್ಕೇಡಿ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಜನಾರ್ಧನ ಪೂಜಾರಿ, ಸಂಘದ ನಿಕಟ ಪೂರ್ವ ಅಧ್ಯಕ್ಷ ಸತೀಶ್ ಕೆರಿಯರ್ ಪ್ರಮುಖರಾದ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು. ಸಂಘಟನೆಯ ಪದಾಧಿಕಾರಿಗಳು ಸಹಕರಿಸಿದರು. ಅಮೂಲ್ಯ ಅನನ್ಯ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ರವಿ ಉಲ್ತೂರು ನಿರೂಪಿಸಿದರು. ಸಂಘದ ಗೌರವಾಧ್ಯಕ್ಷ ಅಮ್ಮಾಜಿ ಕೆ. ಪೂಜಾರಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here