ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ಉಜಿರೆ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

0

ಉಜಿರೆ: ಶ್ರೀ.ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮತ್ತು ದೀಪಕ್ ಇತ್ತೀಚಿಗೆ ನಡೆದ ಎರಡು ವಿಭಿನ್ನ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದರು.

ಮೇ.15 ಮತ್ತು 16ರಂದು ಮಂಗಳೂರಿನ ಯೆನೆಪೋಯ ( ಡೀಮ್ಡ್ ಟು ಬಿ ಯುನಿವರ್ಸಿಟಿ)ದಲ್ಲಿ ಭಾರತ ಸರಕಾರ ಮತ್ತು ಯೂತ್ ಅಫೇರ್ಸ್ ಮತ್ತು ಸ್ಪೋರ್ಟ್ಸ್ ವತಿಯಿಂದ “ ಭಾರತದ ಭವಿಷ್ಯವನ್ನು ಕಲ್ಪಿಸುವುದು: ಬದಲಾವಣೆ ತರುವವರಾಗಿ ಯುವಕರು ” ಎಂಬ ಹೆಸರಿನಡಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರ ಸಂಕೀರ್ಣ ಐಕಾನ್ ಯೂತ್ 2025ರಲ್ಲಿ ಪ್ರಥಮ ವರ್ಷದ ಬಿ.ಎ. ವಿದ್ಯಾರ್ಥಿ ಹಾಗು ಎನ್. ಎಸ್.ಎಸ್. ಸ್ವಯಂ ಸೇವಕ ನೆವಿಲ್ ನವೀನ್ ಮೋರಸ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧಿಸಿದರು.

ಜೂ.5 ಮತ್ತು 6ರಂದು ರಾಜ್ಯ ಎನ್. ಎಸ್. ಎಸ್. ಸೆಲ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ ನಡೆದ “ ಗ್ಲೋಬಲ್ ಯೂತ್ ಸುಮ್ಮಿಟ್ 2025, ಯೂತ್ ಪವರ್, ಇನ್ನೋವೇಟ್, ಇನ್ಸ್ಪೈರ್, ಇಂಪ್ಯಾಕ್ಟ್ ” ನಲ್ಲಿ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿ ದೀಪಕ್ ಮಂಗಳೂರು ವಿಶ್ವ ವಿದ್ಯಾನಿಲಯವನ್ನು ಪ್ರತಿನಿಧಿಸಿದರು.

ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಮಹೇಶ್ ಕುಮಾರ್ ಶೆಟ್ಟಿ ಹೆಚ್., ಪ್ರೊ.ದೀಪ ಆರ್.ಪಿ. ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here