Site icon Suddi Belthangady

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9ಕೋಟಿ ಅನುದಾನ ಮಂಜೂರು: ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ತಾಲೂಕಿನ ಸುಮಾರು 60ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9ಕೋಟಿ ಅನುದಾನ ಮಂಜೂರುಗೊಳಿಸಿದೆ. ಜೂ.11ರಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಅನುದಾನಕ್ಕೆ ಸಹಕರಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಎ., ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಆಲೋಸಿಸ್ ಲೋಬೊ, ವಕೀಲ ಪ್ರಶಾಂತ್ ಉಪಸ್ಥಿತರಿದ್ದರು.

Exit mobile version